<p><strong>ಭೋಪಾಲ್:</strong> ಮಾರ್ಚ್ 16ರ ಸೋಮವಾರ ಮಧ್ಯಪ್ರದೇಶ ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಂದೇ ವಿಶ್ವಾಸಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಕಮಲ್ನಾಥ್ಗೆ ರಾಜ್ಯಪಾಲ ಲಾಲ್ಜಿ ಟಂಡನ್ ಸೂಚಿಸಿದ್ದಾರೆ.</p>.<p>ಇನ್ನೊಂದೆಡೆ, ‘ಈ ಸಂಬಂಧ ಸೋಮವಾರವೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ’ ಎಂದು ಸಭಾಧ್ಯಕ್ಷ ಎನ್.ಪಿ.ಪ್ರಜಾಪತಿ ಭಾನುವಾರ ಹೇಳಿದ್ದಾರೆ. ಹೀಗಾಗಿ ಕಮಲ್ನಾಥ್ ನೇತೃತ್ವದ ಸರ್ಕಾರದ ಅಳಿವು–ಉಳಿವು ಈಗ ಕುತೂಹಲಕರ ಘಟ್ಟ ತಲುಪಿದೆ.</p>.<p>ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಂತೆಯೇ ಅವರಿಗೆ ನಿಷ್ಠರಾದ 22 ಶಾಸಕರೂ ಪಕ್ಷವನ್ನು ತೊರೆದರು. ಈ ಪೈಕಿ ಆರು ಶಾಸಕರ ರಾಜೀನಾಮೆಯನ್ನು ಸಭಾಧ್ಯಕ್ಷ ಪ್ರಜಾಪತಿ ಅಂಗೀಕರಿಸಿದ್ದಾರೆ. ಆದ್ದರಿಂದ ವಿಧಾನಸಭೆಯ ಈಗಿನ ಸಂಖ್ಯಾಬಲ 222ಕ್ಕೆ ಕುಸಿದಿದೆ. ಹೀಗಾಗಿ ಸರಳ ಬಹುಮತಕ್ಕೆ ಅಗತ್ಯವಿರುವ ಶಾಸಕರ ಸಂಖ್ಯೆ 112.</p>.<p>ಕಾಂಗ್ರೆಸ್ ಶಾಸಕರ ಸಂಖ್ಯೆ 108 ಇದ್ದು, ಮೈತ್ರಿ ಪಕ್ಷಗಳ 7 ಶಾಸಕರ ಬೆಂಬಲದೊಂದಿಗೆ ಸರಳ ಬಹುಮತ ಹೊಂದಿದೆ. ಬಿಜೆಪಿ ಸದಸ್ಯರ ಸಂಖ್ಯೆ 107 ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಮಾರ್ಚ್ 16ರ ಸೋಮವಾರ ಮಧ್ಯಪ್ರದೇಶ ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಂದೇ ವಿಶ್ವಾಸಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಕಮಲ್ನಾಥ್ಗೆ ರಾಜ್ಯಪಾಲ ಲಾಲ್ಜಿ ಟಂಡನ್ ಸೂಚಿಸಿದ್ದಾರೆ.</p>.<p>ಇನ್ನೊಂದೆಡೆ, ‘ಈ ಸಂಬಂಧ ಸೋಮವಾರವೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ’ ಎಂದು ಸಭಾಧ್ಯಕ್ಷ ಎನ್.ಪಿ.ಪ್ರಜಾಪತಿ ಭಾನುವಾರ ಹೇಳಿದ್ದಾರೆ. ಹೀಗಾಗಿ ಕಮಲ್ನಾಥ್ ನೇತೃತ್ವದ ಸರ್ಕಾರದ ಅಳಿವು–ಉಳಿವು ಈಗ ಕುತೂಹಲಕರ ಘಟ್ಟ ತಲುಪಿದೆ.</p>.<p>ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಂತೆಯೇ ಅವರಿಗೆ ನಿಷ್ಠರಾದ 22 ಶಾಸಕರೂ ಪಕ್ಷವನ್ನು ತೊರೆದರು. ಈ ಪೈಕಿ ಆರು ಶಾಸಕರ ರಾಜೀನಾಮೆಯನ್ನು ಸಭಾಧ್ಯಕ್ಷ ಪ್ರಜಾಪತಿ ಅಂಗೀಕರಿಸಿದ್ದಾರೆ. ಆದ್ದರಿಂದ ವಿಧಾನಸಭೆಯ ಈಗಿನ ಸಂಖ್ಯಾಬಲ 222ಕ್ಕೆ ಕುಸಿದಿದೆ. ಹೀಗಾಗಿ ಸರಳ ಬಹುಮತಕ್ಕೆ ಅಗತ್ಯವಿರುವ ಶಾಸಕರ ಸಂಖ್ಯೆ 112.</p>.<p>ಕಾಂಗ್ರೆಸ್ ಶಾಸಕರ ಸಂಖ್ಯೆ 108 ಇದ್ದು, ಮೈತ್ರಿ ಪಕ್ಷಗಳ 7 ಶಾಸಕರ ಬೆಂಬಲದೊಂದಿಗೆ ಸರಳ ಬಹುಮತ ಹೊಂದಿದೆ. ಬಿಜೆಪಿ ಸದಸ್ಯರ ಸಂಖ್ಯೆ 107 ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>