ನವದೆಹಲಿ: ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಸೋದರಳಿಯ ರಾತುಲ್ ಪುರಿ ವಿರುದ್ಧ ಹೊರಡಿಸಿರುವ ಜಾಮೀನುರಹಿತ ವಾರಂಟ್ ರದ್ದು ಪಡಿಸಲು ದೆಹಲಿಯ ನ್ಯಾಯಾಲಯವು ಬುಧವಾರ ನಿರಾಕರಿಸಿದೆ
ಅಕ್ರಮವಾಗಿ ಹಣ ವರ್ಗಾವಣೆ ನಡೆಸಿರುವ ಆರೋಪ ರಾತುಲ್ ಮೇಲಿದೆ. ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು ರಾತುಲ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.