ರಾಜೀನಾಮೆ ನೀಡಿರುವ ಶಾಸಕರ ಪರವಾಗಿವ ಮುಂಬೈನಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್, ‘ 13 ಶಾಸಕರು ಸ್ಪೀಕರ್ಗೆ ರಾಜೀನಾಮೆ ನೀಡಿದ್ದೇವೆ. ಇದನ್ನೇ ರಾಜ್ಯಪಾಲರಿಗೂ ತಿಳಿಸಿದ್ದೇವೆ. ನಾವೆಲ್ಲರೂ ಒಟ್ಟಿಗಿದ್ದೇವೆ. ಮರಳಿ ಬೆಂಗಳೂರಿಗೆ ಹೋಗುವ ಮಾತಿಲ್ಲ. ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ,’ ಎಂದು ಅವರು ಸ್ಪಷ್ಟಪಡಿಸಿದರು.