ನವದೆಹಲಿ: ‘ಹಿಂಸಾಚಾರ ತೊರೆದು ಶಾಂತಿ ಮಾರ್ಗದಲ್ಲಿ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಯತ್ನಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿ ನಡೆದ ಹಿಂಸಾಚಾರ ಮತ್ತು ಇತ್ತೀಚೆಗೆ ಅಪಾರ ಸಂಖ್ಯೆಯಲ್ಲಿ ಉಗ್ರರು ಶರಣಾಗತರಾಗಿರುವುದನ್ನು ಪ್ರಸ್ತಾಪಿಸಿ ‘ಮನದ ಮಾತು’ ರೇಡಿಯೊ ಮಾಸಿಕ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ‘ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಈಗ ಗಣನೀಯವಾಗಿ ಕಡಿಮೆಯಾಗಿದೆ ಎಂದರು.