ದಿಲೀಪ್ ಘೋಷ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ತೃಣಮೂಲ ಕಾಂಗ್ರೆಸ್ ಮುಖಂಡ ತಪಸ್ ರಾಯ್ ಅವರು, ’ಎಲ್ಲ ರಾಜ್ಯಗಳ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಬಂಗಾಳದ ಮೇಲೆ ಹಿಡಿತ ಸಾಧಿಸಲು ಬಿಜೆಪಿಯವರು ಹಿಂಸೆಯನ್ನು ಹುಟ್ಟುಹಾಕುತ್ತಿದ್ದಾರೆ. ದಿಲೀಪ್ ಘೋಷ್ ಅವರಿಗೆ ಬಂಗಾಳ ರಾಜಕೀಯ ಸಂಸ್ಕೃತಿಯ ಬಗ್ಗೆ ಅರಿವಿಲ್ಲ‘ ಎಂದು ಹರಿಹಾಯ್ದಿದ್ದಾರೆ.