ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಧಿ ತ್ರಿಪಾಠಿ, ಜನವರಿ 5ರಂದು ಜೆಎನ್ಯುವಿಲ್ಲಿ ನಡೆದ ಹಿಂಸಾಚಾರದ ಕುರಿತು ಸಂಪೂರ್ಣ ತನಿಖೆಯಾಗಬೇಕು ಮತ್ತು ಆರೋಪಿಗಳಿಗೆ ತಕ್ಕ ಶಾಸ್ತಿಯಾಗಬೇಕೆಂದು ನಾವು ಬಯಸುತ್ತೇವೆ. ದೆಹಲಿ ಪೊಲೀಸರು ಆರೋಪಿಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ ಮತ್ತು ಕೆಲವರು ತಾವೇ ಸಂತ್ರಸ್ತರು ಎಂದು ಆಟವಾಡುತ್ತಿದ್ದಾರೆ. ಹೀಗಾಗಿ ಹಿಂಸಾಚಾರದ ಹಿಂದಿನ ಅವರ ಹೆಸರು ಜನರಿಂದ ಮರೆಮಾಚಲ್ಪಟ್ಟಿದೆ. ದೇಶದ ಗಮನ ಬೇರೆಡೆ ಸೆಳೆಯಲು ಅವರು ಮತ್ತೆ ಕಥೆಗಳನ್ನು ಶುರುಮಾಡುತ್ತಾರೆ ಎಂದು ಹೇಳಿದರು.