ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್ಜೆಡಿ ಮುಖ್ಯಸ್ಥ ಹಾಗೂ ತಂದೆ ಲಾಲೂ ಪ್ರಸಾದ್ ಯಾದವ್ ಅವರನ್ನುಲೋಕ ಸಮತಾ ಪಕ್ಷದ ಮುಖ್ಯಸ್ಥ ಉಪೇಂದ್ರ ಕುಶ್ವಾಹ, ವಿಕಾಸಿಲ್ ಇನ್ಸಾನ್ ಪಕ್ಷದ ಮುಕೇಶ್ ಸಹನಿ ಅವರೊಂದಿಗೆ ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಯಾದವ್,‘ದಯವಿಟ್ಟು ತಾಳ್ಮೆಯಿಂದಿರಿ. ನಮ್ಮ ಕಾರ್ಯತಂತ್ರಗಳನ್ನು ಮಾಧ್ಯಮಗಳಿಗೆ ಈಗ ಹೇಳುವುದಿಲ್ಲ. ಸಮಯ ಬಂದಾಗ ತಿಳಿಸುತ್ತೇವೆ’ ಎಂದರು.ನಮ್ಮ ತಂದೆಯವರ ಆರೋಗ್ಯ ಸ್ಥಿತಿ ಬಗ್ಗೆ ಕುಟುಂಬದವರು ಕಾಳಜಿ ವಹಿಸುತ್ತಿದ್ದಾರೆ ಎಂದೂ ಹೇಳಿದರು.