ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ವ–ಪಶ್ಚಿಮ ಮೆಟ್ರೊ ಉದ್ಘಾಟನೆಗೆ ಆಹ್ವಾನ ನೀಡದ ಕೇಂದ್ರ: ಮಮತಾ ಬೇಸರ

Last Updated 14 ಫೆಬ್ರುವರಿ 2020, 12:38 IST
ಅಕ್ಷರ ಗಾತ್ರ

ಕೋಲ್ಕತ: ಇಲ್ಲಿನ ಪೂರ್ವ–ಪಶ್ಚಿಮ ಮೆಟ್ರೊಕಾರಿಡಾರ್‌ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸದ ಕೇಂದ್ರ ಸರ್ಕಾರದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಮಾತನಾಡಿರುವ ಅವರು, ‘ಪೂರ್ವ–ಪಶ್ಚಿಮ ಮೆಟ್ರೊಯೋಜನೆ ಸಾಕಾರದ ಹಿಂದೆ ನಮ್ಮದು ಕಠಿಣ ಪರಿಶ್ರಮ ಇದೆ. ನಾನು ಕೇಂದ್ರದಲ್ಲಿ ರೈಲ್ವೆ ಮಂತ್ರಿ ಆಗಿದ್ದಾಗ ಈ ಯೋಜನೆಯನ್ನು ಮಂಜೂರು ಮಾಡಿಸಿದ್ದೆ. ಆದರೆ, ಈ ಯೋಜನೆಯ ಉದ್ಘಾಟನೆ ಬಗ್ಗೆ ಕೇಂದ್ರ ಸರ್ಕಾರವು ನನಗೆ ಯಾವುದೇ ಮಾಹಿತಿ ನೀಡಲಿಲ್ಲ. ಇದರಿಂದ ನನಗೆ ತೀವ್ರ ಬೇಸರವಾಗಿದೆ’ ಎಂದು ಮಮತಾ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ನಡೆ ಖಂಡಿಸಿ ಉದ್ಘಾಟನೆ ಸಮಾರಂಭವನ್ನು ಬಹಿಸ್ಕರಿಸಲು ಟಿಎಂಸಿ ನಿರ್ಧರಿಸಿತ್ತು.

ಪೂರ್ವ–ಪಶ್ಚಿಮ ಮೆಟ್ರೊಕಾರಿಡಾರ್‌ ಅನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಅವರು ಗುರುವಾರ ಸಂಜೆ ಉದ್ಘಾಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT