<p><strong>ನವದೆಹಲಿ:</strong> ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರದ ನಂತರ ಚುನಾವಣಾ ಆಯೋಗವು ಭಾನುವಾರ ಬಂಕುರಾ ಜಿಲ್ಲಾಧಿಕಾರಿ ಉಮಾ ಶಂಕರ್ ಅವರನ್ನು ವರ್ಗಾವಣೆ ಮಾಡಿದೆ. ಮುಕ್ತ ಆರ್ಯ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.</p>.<p>‘ಮುಕ್ತ ಆರ್ಯ ಅವರನ್ನು ಬಂಕುರದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿಗೆ ಕಳಿಸಿರುವ ಪತ್ರದಲ್ಲಿ ತಿಳಿಸಿದೆ.</p>.<p>ಸೋಮವಾರ ಮುಂಜಾನೆ ಮತಯಂತ್ರಗಳ ಲೆಕ್ಕಪರಿಶೀಲನೆ (ಸ್ಕ್ರೂಟಿನಿ) ಕಾರ್ಯ ಆರಂಭವಾಗುವ ಮೊದಲು ಆರ್ಯ ಜವಾಬ್ದಾರಿ ತೆಗೆದುಕೊಂಡಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಬಂಕುರದ ಮತಗಟ್ಟೆ ಸಂಖ್ಯೆ 1 ಸಮೀಪಟಿಎಂಸಿ ಮತ್ತುಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಹಿಂಸಾಚಾರದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ನಿನ್ನೆ (ಭಾನುವಾರ) ನಡೆದ 6ನೇ ಹಂತದ ಚುನಾವಣೆಯಲ್ಲಿ ಪಶ್ಚಿಮ ಬಂಗಳಾದ ಎಂಟು ಕ್ಷೇತ್ರಗಳಿಗೆ ಮತದಾನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರದ ನಂತರ ಚುನಾವಣಾ ಆಯೋಗವು ಭಾನುವಾರ ಬಂಕುರಾ ಜಿಲ್ಲಾಧಿಕಾರಿ ಉಮಾ ಶಂಕರ್ ಅವರನ್ನು ವರ್ಗಾವಣೆ ಮಾಡಿದೆ. ಮುಕ್ತ ಆರ್ಯ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.</p>.<p>‘ಮುಕ್ತ ಆರ್ಯ ಅವರನ್ನು ಬಂಕುರದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿಗೆ ಕಳಿಸಿರುವ ಪತ್ರದಲ್ಲಿ ತಿಳಿಸಿದೆ.</p>.<p>ಸೋಮವಾರ ಮುಂಜಾನೆ ಮತಯಂತ್ರಗಳ ಲೆಕ್ಕಪರಿಶೀಲನೆ (ಸ್ಕ್ರೂಟಿನಿ) ಕಾರ್ಯ ಆರಂಭವಾಗುವ ಮೊದಲು ಆರ್ಯ ಜವಾಬ್ದಾರಿ ತೆಗೆದುಕೊಂಡಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಬಂಕುರದ ಮತಗಟ್ಟೆ ಸಂಖ್ಯೆ 1 ಸಮೀಪಟಿಎಂಸಿ ಮತ್ತುಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಹಿಂಸಾಚಾರದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ನಿನ್ನೆ (ಭಾನುವಾರ) ನಡೆದ 6ನೇ ಹಂತದ ಚುನಾವಣೆಯಲ್ಲಿ ಪಶ್ಚಿಮ ಬಂಗಳಾದ ಎಂಟು ಕ್ಷೇತ್ರಗಳಿಗೆ ಮತದಾನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>