‘ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿಕಲಬುರ್ಗಿಯಲ್ಲಿಫೆಬ್ರುವರಿ 16ರಂದು ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿತ್ತು. ಈ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ವಾರಿಸ್, ‘ಇತರ 100 ಕೋಟಿ ಜನರ ಮೇಲೆ ಪ್ರಾಬಲ್ಯ ಸಾಧಿಸಲು 15 ಕೋಟಿಯಷ್ಟಿರುವ ಮುಸ್ಲಿಮರು ಸಾಕು’ ಎಂದು ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹೇಳಿಕೆ ಇರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.