<p class="title"><strong>ನವದೆಹಲಿ:</strong> ಭಾರತೀಯ ಯೋಧರನ್ನು ಚೀನಾ ಗಡಿಗೆ ನಿರಾಯುಧರನ್ನಾಗಿ ಏಕೆ ಕಳುಹಿಸಲಾಯಿತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.</p>.<p class="bodytext">ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಭಾರತದ 20 ಯೋಧರು ಹುತಾತ್ಮರಾದ ಬಗ್ಗೆ ಸರಣಿ ಪ್ರಶ್ನೆಗಳನ್ನು ಕೇಳಿರುವ ರಾಹುಲ್, ಪ್ರಧಾನಿ ಅವರಿಂದ ಉತ್ತರ ಬಯಸಿದ್ದಾರೆ. ‘ನಿರಾಯುಧ ಯೋಧರನ್ನು ಕೊಲ್ಲಲು ಚೀನಾಕ್ಕೆ ಅದೆಷ್ಟು ಧೈರ್ಯ? ಹುತಾತ್ಮರಾಗಲು ನಿರಾಯುಧ ಸೈನಿಕರನ್ನೇಕೆ ಗಡಿಗೆ ಕಳುಹಿಸಲಾಯಿತು’ ಎಂದು ಪ್ರಶ್ನಿಸಿದ್ದಾರೆ.</p>.<p class="bodytext">ರಕ್ಷಣಾ ಸಚಿವರನ್ನೂ ತರಾಟೆಗೆ ತೆಗೆದುಕೊಂಡಿರುವ ಅವರು, ‘ಟ್ವಿಟರ್ನಲ್ಲಿ ಚೀನಾ ಹೆಸರನ್ನು ಉಲ್ಲೇಖಿಸದೇ ಭಾರತೀಯ ಸೇನೆಗೆ ಏಕೆ ಅಪಮಾನ ಮಾಡಿದಿರಿ? ಯೋಧರ ಸಾವಿಗೆ ಸಂತಾಪ ಸೂಚಿಸಲು ಎರಡು ದಿನ ತೆಗೆದುಕೊಂಡಿದ್ದು ಏಕೆ? ಅತ್ತ ಯೋಧರು ಹುತಾತ್ಮರಾಗುತ್ತಿರುವಾಗ ನೀವು ಚುನಾವಣಾ ಸಮಾವೇಶಗಳನ್ನು ನಡೆಸುವುದು ಎಷ್ಟು ಸರಿ’ ಎಂದು ರಾಜನಾಥ್ ಸಿಂಗ್ ಅವರನ್ನು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಭಾರತೀಯ ಯೋಧರನ್ನು ಚೀನಾ ಗಡಿಗೆ ನಿರಾಯುಧರನ್ನಾಗಿ ಏಕೆ ಕಳುಹಿಸಲಾಯಿತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.</p>.<p class="bodytext">ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಭಾರತದ 20 ಯೋಧರು ಹುತಾತ್ಮರಾದ ಬಗ್ಗೆ ಸರಣಿ ಪ್ರಶ್ನೆಗಳನ್ನು ಕೇಳಿರುವ ರಾಹುಲ್, ಪ್ರಧಾನಿ ಅವರಿಂದ ಉತ್ತರ ಬಯಸಿದ್ದಾರೆ. ‘ನಿರಾಯುಧ ಯೋಧರನ್ನು ಕೊಲ್ಲಲು ಚೀನಾಕ್ಕೆ ಅದೆಷ್ಟು ಧೈರ್ಯ? ಹುತಾತ್ಮರಾಗಲು ನಿರಾಯುಧ ಸೈನಿಕರನ್ನೇಕೆ ಗಡಿಗೆ ಕಳುಹಿಸಲಾಯಿತು’ ಎಂದು ಪ್ರಶ್ನಿಸಿದ್ದಾರೆ.</p>.<p class="bodytext">ರಕ್ಷಣಾ ಸಚಿವರನ್ನೂ ತರಾಟೆಗೆ ತೆಗೆದುಕೊಂಡಿರುವ ಅವರು, ‘ಟ್ವಿಟರ್ನಲ್ಲಿ ಚೀನಾ ಹೆಸರನ್ನು ಉಲ್ಲೇಖಿಸದೇ ಭಾರತೀಯ ಸೇನೆಗೆ ಏಕೆ ಅಪಮಾನ ಮಾಡಿದಿರಿ? ಯೋಧರ ಸಾವಿಗೆ ಸಂತಾಪ ಸೂಚಿಸಲು ಎರಡು ದಿನ ತೆಗೆದುಕೊಂಡಿದ್ದು ಏಕೆ? ಅತ್ತ ಯೋಧರು ಹುತಾತ್ಮರಾಗುತ್ತಿರುವಾಗ ನೀವು ಚುನಾವಣಾ ಸಮಾವೇಶಗಳನ್ನು ನಡೆಸುವುದು ಎಷ್ಟು ಸರಿ’ ಎಂದು ರಾಜನಾಥ್ ಸಿಂಗ್ ಅವರನ್ನು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>