ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಾಯುಧ ಯೋಧರನ್ನು ಕಳುಹಿಸಿದ್ದು ಏಕೆ: ರಾಹುಲ್ ಪ್ರಶ್ನೆ

Last Updated 18 ಜೂನ್ 2020, 7:39 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಯೋಧರನ್ನು ಚೀನಾ ಗಡಿಗೆ ನಿರಾಯುಧರನ್ನಾಗಿ ಏಕೆ ಕಳುಹಿಸಲಾಯಿತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಭಾರತದ 20 ಯೋಧರು ಹುತಾತ್ಮರಾದ ಬಗ್ಗೆ ಸರಣಿ ಪ್ರಶ್ನೆಗಳನ್ನು ಕೇಳಿರುವ ರಾಹುಲ್, ಪ್ರಧಾನಿ ಅವರಿಂದ ಉತ್ತರ ಬಯಸಿದ್ದಾರೆ. ‘ನಿರಾಯುಧ ಯೋಧರನ್ನು ಕೊಲ್ಲಲು ಚೀನಾಕ್ಕೆ ಅದೆಷ್ಟು ಧೈರ್ಯ? ಹುತಾತ್ಮರಾಗಲು ನಿರಾಯುಧ ಸೈನಿಕರನ್ನೇಕೆ ಗಡಿಗೆ ಕಳುಹಿಸಲಾಯಿತು’ ಎಂದು ಪ್ರಶ್ನಿಸಿದ್ದಾರೆ.

ರಕ್ಷಣಾ ಸಚಿವರನ್ನೂ ತರಾಟೆಗೆ ತೆಗೆದುಕೊಂಡಿರುವ ಅವರು, ‘ಟ್ವಿಟರ್‌ನಲ್ಲಿ ಚೀನಾ ಹೆಸರನ್ನು ಉಲ್ಲೇಖಿಸದೇ ಭಾರತೀಯ ಸೇನೆಗೆ ಏಕೆ ಅಪಮಾನ ಮಾಡಿದಿರಿ? ಯೋಧರ ಸಾವಿಗೆ ಸಂತಾಪ ಸೂಚಿಸಲು ಎರಡು ದಿನ ತೆಗೆದುಕೊಂಡಿದ್ದು ಏಕೆ? ಅತ್ತ ಯೋಧರು ಹುತಾತ್ಮರಾಗುತ್ತಿರುವಾಗ ನೀವು ಚುನಾವಣಾ ಸಮಾವೇಶಗಳನ್ನು ನಡೆಸುವುದು ಎಷ್ಟು ಸರಿ’ ಎಂದು ರಾಜನಾಥ್ ಸಿಂಗ್ ಅವರನ್ನು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT