ರಾಹುಲ್ ಗಾಂಧಿ ಏಕಿಲ್ಲ?:ಪ್ರಧಾನಿ ನರೇಂದ್ರ ಮೋದಿಯವರೂ ಹಿಂದುಳಿದ ವರ್ಗಗಳಿಂದ ಬಂದವರು. ಅವರಿಗೆ ಬಡ ಜನರ ಬಗ್ಗೆ ನಿಜವಾದ ಕಾಳಜಿ ಇದೆ ಎಂದು ಬಿಜೆಪಿ ಸಂಸದ ಪ್ರಭಾತ್ ಝಾ ಹೇಳಿದರು. ಅಲ್ಲದೆ, ‘ರಾಹುಲ್ ಗಾಂಧಿ ಅವರು ರಫೇಲ್ ಬಗ್ಗೆ ಕನಸು ಕಾಣುತ್ತಿರಬಹುದು. ಮೀಸಲಾತಿ ಮಸೂದೆ ಬಗ್ಗೆ ಅವರು ಯಾಕೆ ಮಾತನಾಡುತ್ತಿಲ್ಲ’ ಎಂದೂ ಪ್ರಶ್ನಿಸಿದರು.