ಇಫ್ತಾರ್ ಮಾತ್ರ ಯಾಕೆ? ನವರಾತ್ರಿಗೂ ಮಾಡಬಹುದಿತ್ತಲ್ಲವೇ?: ಗಿರಿರಾಜ್ ಸಿಂಗ್

ನವದೆಹಲಿ: ಎಲ್ಜೆಪಿ ಪಕ್ಷದ ನಾಯಕ ರಾಮ ವಿಲಾಸ್ ಪಾಸ್ವಾನ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಭಾಗವಹಿಸಿದ್ದರು.ಎನ್ಡಿಎ ನಾಯಕರು ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿರುವ ಫೋಟೊ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ನಮ್ಮ ಧರ್ಮದ ಆಚರಣೆಗಳಿಗೆ ನಾವು ಯಾಕೆ ಹಿಂದೇಟು ಹಾಕುತ್ತಿದ್ದೇವೆ ಎಂದು ಪ್ರಶ್ನಿಸಿದ್ದಾರೆ.
कितनी खूबसूरत तस्वीर होती जब इतनी ही चाहत से नवरात्रि पे फलाहार का आयोजन करते और सुंदर सुदंर फ़ोटो आते??...अपने कर्म धर्म मे हम पिछड़ क्यों जाते और दिखावा में आगे रहते है??? pic.twitter.com/dy7s1UgBgy
— Shandilya Giriraj Singh (@girirajsinghbjp) June 4, 2019
ಇಷ್ಟೇ ಪ್ರೀತಿಯಿಂದ ನವರಾತ್ರಿ ಹಬ್ಬದ ವೇಳೆ ಈ ರೀತಿ ಫಲಾಹಾರ ಕೂಟ ಆಯೋಜಿಸಿದ್ದರೆ ಸುಂದರವಾದ ಚಿತ್ರಗಳು ಸಿಗುತ್ತಿದ್ದವು. ನಮ್ಮ ಕರ್ಮ ಮತ್ತು ಧರ್ಮದಲ್ಲಿ ನಾವು ಹಿಂದೇಟು ಹಾಕುತ್ತಿದ್ದು, ಬರೀ ಪ್ರದರ್ಶನ ಮಾಡುವುದರಲ್ಲಿ ನಾವು ಮುಂದಿದ್ದೇವೆ ಎಂದು ಗಿರಿರಾಜ್ ಟ್ವೀಟಿಸಿದ್ದಾರೆ.
ಸೋಮವಾರ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇಫ್ತಾರ್ ಕೂಟ ಆಯೋಜಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.