ನವದೆಹಲಿ: ಎಲ್ಜೆಪಿ ಪಕ್ಷದ ನಾಯಕ ರಾಮ ವಿಲಾಸ್ ಪಾಸ್ವಾನ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಭಾಗವಹಿಸಿದ್ದರು.ಎನ್ಡಿಎ ನಾಯಕರು ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿರುವ ಫೋಟೊ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ನಮ್ಮ ಧರ್ಮದ ಆಚರಣೆಗಳಿಗೆ ನಾವು ಯಾಕೆ ಹಿಂದೇಟು ಹಾಕುತ್ತಿದ್ದೇವೆ ಎಂದು ಪ್ರಶ್ನಿಸಿದ್ದಾರೆ.