<p><strong>ಚೆನ್ನೈ </strong>: ಚೆನ್ನೈ ನಗರದಲ್ಲಿ ಕೋವಿಡ್– 19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಕೆಲ ಸಮಯ ನಗರವನ್ನು ಸಂಪೂರ್ಣ ಲಾಕ್ಡೌನ್ನಲ್ಲಿ ಇಡಬಾರದೇಕೆ ಎಂದುಮದ್ರಾಸ್ ಹೈಕೋರ್ಟ್ ಗುರುವಾರ ಪ್ರಶ್ನಿಸಿದೆ.</p>.<p>ತಮಿಳುನಾಡು ಸರ್ಕಾರವು ಕ್ರಮ ಕೈಗೊಂಡಿದ್ದರೂ ನಗರ ಹಾಗೂ ಹೊರವಲಯ ಭಾಗದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಅಪಾಯದ ಹಂತವನ್ನು ತಲುಪಿದೆ ಎಂದು ನ್ಯಾಯಮೂರ್ತಿಗಳಾದ ವಿನೀತ್ ಕೊಠಾರಿ ಹಾಗೂ ಆರ್.ಸುರೇಶ್ಕುಮಾರ್ ಅವರನ್ನು ಒಳಗೊಂಡ ಪೀಠವು ತಿಳಿಸಿದೆ.</p>.<p>ಸರ್ಕಾರವು ವೈರಸ್ ನಿಯಂತ್ರಣಕ್ಕೆ ವಿಶೇಷ ಯೋಜನೆಗಳನ್ನು ರೂಪಿಸಿದ್ದರೆ, ಆ ಬಗ್ಗೆ ತಿಳಿದುಕೊಳ್ಳಲು ಇಷ್ಟಪಡುತ್ತೇವೆ. ರಾಜ್ಯ ಹಾಗೂ ನಗರದ ಪ್ರಜೆಯಾಗಿ ಲಾಕ್ಡೌನ್ ಅನುಷ್ಠಾನಗೊಳಿಸುವ ಬಗ್ಗೆ ಪ್ರಶ್ನೆ ಎತ್ತಿದ್ದೇವೆ ಹೊರತು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಪ್ರಸ್ತಾಪಿಸುತ್ತಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ </strong>: ಚೆನ್ನೈ ನಗರದಲ್ಲಿ ಕೋವಿಡ್– 19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಕೆಲ ಸಮಯ ನಗರವನ್ನು ಸಂಪೂರ್ಣ ಲಾಕ್ಡೌನ್ನಲ್ಲಿ ಇಡಬಾರದೇಕೆ ಎಂದುಮದ್ರಾಸ್ ಹೈಕೋರ್ಟ್ ಗುರುವಾರ ಪ್ರಶ್ನಿಸಿದೆ.</p>.<p>ತಮಿಳುನಾಡು ಸರ್ಕಾರವು ಕ್ರಮ ಕೈಗೊಂಡಿದ್ದರೂ ನಗರ ಹಾಗೂ ಹೊರವಲಯ ಭಾಗದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಅಪಾಯದ ಹಂತವನ್ನು ತಲುಪಿದೆ ಎಂದು ನ್ಯಾಯಮೂರ್ತಿಗಳಾದ ವಿನೀತ್ ಕೊಠಾರಿ ಹಾಗೂ ಆರ್.ಸುರೇಶ್ಕುಮಾರ್ ಅವರನ್ನು ಒಳಗೊಂಡ ಪೀಠವು ತಿಳಿಸಿದೆ.</p>.<p>ಸರ್ಕಾರವು ವೈರಸ್ ನಿಯಂತ್ರಣಕ್ಕೆ ವಿಶೇಷ ಯೋಜನೆಗಳನ್ನು ರೂಪಿಸಿದ್ದರೆ, ಆ ಬಗ್ಗೆ ತಿಳಿದುಕೊಳ್ಳಲು ಇಷ್ಟಪಡುತ್ತೇವೆ. ರಾಜ್ಯ ಹಾಗೂ ನಗರದ ಪ್ರಜೆಯಾಗಿ ಲಾಕ್ಡೌನ್ ಅನುಷ್ಠಾನಗೊಳಿಸುವ ಬಗ್ಗೆ ಪ್ರಶ್ನೆ ಎತ್ತಿದ್ದೇವೆ ಹೊರತು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಪ್ರಸ್ತಾಪಿಸುತ್ತಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>