ಸರ್ಕಾರವು ವೈರಸ್ ನಿಯಂತ್ರಣಕ್ಕೆ ವಿಶೇಷ ಯೋಜನೆಗಳನ್ನು ರೂಪಿಸಿದ್ದರೆ, ಆ ಬಗ್ಗೆ ತಿಳಿದುಕೊಳ್ಳಲು ಇಷ್ಟಪಡುತ್ತೇವೆ. ರಾಜ್ಯ ಹಾಗೂ ನಗರದ ಪ್ರಜೆಯಾಗಿ ಲಾಕ್ಡೌನ್ ಅನುಷ್ಠಾನಗೊಳಿಸುವ ಬಗ್ಗೆ ಪ್ರಶ್ನೆ ಎತ್ತಿದ್ದೇವೆ ಹೊರತು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಪ್ರಸ್ತಾಪಿಸುತ್ತಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.