‘ನಾವು ಈಗಾಗಲೇ ನಮ್ಮ ಪಕ್ಷ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ಕಾಂಗ್ರೆಸ್ಗೆ ಬಹುಮತ ದೊರೆತರೆ, ಖಂಡಿತ ಪಕ್ಷ ನಾಯಕತ್ವ ವಹಿಸಿಕೊಳ್ಳಲಿದೆ. ಎನ್ಡಿಎ ಮತ್ತೆ ಅಧಿಕಾರಕ್ಕೆ ಬರಬಾರದು ಎನ್ನುವುದೇ ನಮ್ಮ ಉದ್ದೇಶ. ಹಾಗಾಗಿ ಎಲ್ಲರೂ ಒಮ್ಮತದಿಂದ ತೆಗೆದುಕೊಳ್ಳುವ ನಿರ್ಧಾರವನ್ನು ನಾವು ಒಪ್ಪಿಕೊಳ್ಳುತ್ತೇವೆ’ ಎಂದು ಅಜಾದ್ ಪಟ್ನಾದಲ್ಲಿ ಬುಧವಾರ ತಿಳಿಸಿದ್ದರು.