ರಫೇಲ್ ಪ್ರಕರಣದಲ್ಲಿ ಕೇಂದ್ರದ ಒಪ್ಪಂದದ ನಿರ್ಧಾರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅನುಮಾನ ಪಡುವ ಯಾವುದೇ ಕಾರಣ ತೋರುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಡಿಸೆಂಬರ್ನಲ್ಲಿ ಹೇಳಿತ್ತು. 2016ರ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿದೇಶಿ ಪಾಲುದಾರ ಕಂಪನಿಯನ್ನು ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಸರ್ಕಾರ ಪಕ್ಷಪಾತ ಮಾಡಿದೆ. ಅನಿಲ್ ಅಂಬಾನಿ ಸಂಸ್ಥೆಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಿದೆ, ಭ್ರಷ್ಟಾಚಾರ ನಡೆದಿರುವುದಾಗಿ ಕಾಂಗ್ರೆಸ್ ಆರೋಪಿಸಿತ್ತು.