ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ಕಳಿಸುತ್ತೇನೆ ಕಾಶ್ಮೀರಕ್ಕೆ ಬನ್ನಿ;ವಿಮಾನ ಬೇಡ ಸ್ವಾತಂತ್ರ್ಯದ ಖಾತ್ರಿ ನೀಡಿ

Last Updated 13 ಆಗಸ್ಟ್ 2019, 12:09 IST
ಅಕ್ಷರ ಗಾತ್ರ

ನವದೆಹಲಿ: ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಜಮ್ಮು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್‌ ಮಲ್ಲೀಕ್‌ ಅವರ ನಡುವೆ ವಾಗ್ವಾದ ನಡೆಯುತ್ತಿದೆ.

ವಿಮಾನ ಕಳುಹಿಸುತ್ತೇನೆ... ಕಾಶ್ಮೀರಕ್ಕೆ ಬಂದು ನೋಡಿ ಆಮೇಲೆ ಮಾತನಾಡಿ ಎಂದು ಜಮ್ಮು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್‌ ಮಲ್ಲೀಕ್‌ ಹೇಳಿದರೆ, ಅತ್ತ ರಾಹುಲ್‌ ಗಾಂಧಿ, ‘ವಿಮಾನವೇನೂ ಬೇಡ... ಕಾಶ್ಮೀರದಲ್ಲಿ ಮುಕ್ತ ವಾತಾವರಣವಿದೆ,’ ಎಂಬುದನ್ನು ಖಾತ್ರಿ ಮಾಡಿ ಎಂದು ಟ್ವೀಟ್‌ ಮಾಡಿದ್ದಾರೆ.

‘ಸಂವಿಧಾನದ ವಿಧಿ 370ರ ಅಡಿಯಲ್ಲಿ ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ನಂತರಅಲ್ಲಿ ಹಿಂಸಾಚಾರಗಳು ಸಂಭವಿಸುತ್ತಿರುವ ಬಗ್ಗೆ ನನಗೆ ಮಾಹಿತಿ ಇದೆ,’ ಎಂದು ರಾಹುಲ್‌ ಗಾಂಧಿ ಅವರು ಕಳೆದ ಶನಿವಾರ ಹೇಳಿಕೆ ನೀಡಿದ್ದರು. ಇದೇ ವಿಚಾರಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದ ಜಮ್ಮು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್‌ ಮಲ್ಲೀಕ್‌, ‘ಜಮ್ಮು ಕಾಶ್ಮೀರಕ್ಕೆ ಬರಲು ರಾಹುಲ್‌ ಗಾಂಧಿ ಅವರಿಗೆ ನಾನು ಆಹ್ವಾನ ನೀಡುತ್ತೇನೆ. ಇಲ್ಲಿಗೆ ಬಂದು ಪರಿಸ್ಥಿತಿಯನ್ನು ಅವಲೋಕಿಸಲಿ ಅವರಿಗೆ ವಿಮಾನ ಕಳುಹಿಸಿಕೊಡುತ್ತೇನೆ. ನಂತರ ಅವರು ಮಾತನಾಡಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಈ ರೀತಿ ಮಾತನಾಡಬಾರದು.’ ಎಂದು ಹೇಳಿದ್ದರು.

ಸತ್ಯಪಾಲ್‌ ಮಲ್ಲೀಕ್‌ ಅವರ ಈ ಹೇಳಿಕೆಗೆ ತಿರುಗೇಟು ನೀಡಿರುವ ರಾಹುಲ್‌ ಗಾಂಧಿ, ‘ರಾಜ್ಯಪಾಲರೇ, ಜಮ್ಮು ಕಾಶ್ಮೀರ ಮತ್ತು ಲಡಾಕ್‌ಗೆ ಬರುವಂತೆ ನೀಡಿದ ಆಹ್ವಾನವನ್ನು ವಿರೋಧ ಪಕ್ಷಗಳ ನಿಯೋಗ ಮತ್ತು ನಾನು ಸ್ವೀಕರಿಸಿದ್ದೇವೆ. ಆದರೆ, ನಮಗೆ ವಿಮಾನ ಬೇಡ. ಅಲ್ಲಿ ಮುಕ್ತವಾಗಿ ಓಡಾಡುವ, ಜನರು, ನಾಯಕರು, ಸೈನಿಕರನ್ನು ಭೇಟಿಯಾಗಲು ಸ್ವಾತಂತ್ರ್ಯವಿದೆ ಎಂಬುದನ್ನುಖಾತ್ರಿಪಡಿಸಿ,’ ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT