ಕಾಶ್ಮೀರದ ಸಮಸ್ಯೆಗೆ ಕೇಂದ್ರ ಸರ್ಕಾರ ಪ್ರಾಮಾಣಿಕವಾಗಿ ಸ್ಪಂದಿಸುತ್ತಿಲ್ಲ. ದೇಶದಲ್ಲಿರುವ 20 ಕೋಟಿ ಮುಸ್ಲಿಮರನ್ನು ಕಡೆಗಣಿಸಲಾಗುತ್ತಿದೆ. ಅವರು ತಲೆಎತ್ತಲು ಸಾಧ್ಯವಾಗದಂಥ ಪರಿಸ್ಥಿತಿ ನಿರ್ಮಿಸಲು ಯತ್ನಿಸುತ್ತಿರುವ ಹಿಂದುತ್ವವಾದಿ ಶಕ್ತಿಗಳು, ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಂತೆ ನಡೆಸಿಕೊಳ್ಳುತ್ತಿವೆ. ಅಲ್ಲದೆ, ಕಾಶ್ಮೀರದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹತ್ಯೆಗಳನ್ನು ಖಂಡಿಸಿ ನನ್ನ ಹುದ್ದೆ ರಾಜೀನಾಮೆ ನೀಡುತ್ತಿರುವುದಾಗಿ ಶಾ ಫೈಸಲ್ ಫೇಸ್ಬುಕ್ನಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ್ದರು.