ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರದ್‌ ಪವಾರ್‌ ನಿವಾಸದ ಭದ್ರತೆ ಹಿಂಪಡೆದ ಕೇಂದ್ರ: ರಾಜಕೀಯ ಪ್ರೇರಿತ ಎಂದ ಎನ್‌ಸಿಪಿ

Last Updated 24 ಜನವರಿ 2020, 13:13 IST
ಅಕ್ಷರ ಗಾತ್ರ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರ ನವದೆಹಲಿಯಲ್ಲಿರುವ ಅಧಿಕೃತ ನಿವಾಸಕ್ಕೆ ನೀಡಲಾಗಿದ್ದ ‘ವೈ’ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಎನ್‌ಸಿಪಿ ಆರೋಪಿಸಿದೆ.

‘ಕೇಂದ್ರ ಸರ್ಕಾರ ‘ಸೇಡಿನ ರಾಜಕೀಯ’ ಮಾಡುತ್ತಿದೆ. ಇಂಥ ನಿರ್ಧಾರದಿಂದ ಪಕ್ಷದ ನಾಯಕರು ಹೆದರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ಮಹಾರಾಷ್ಟ್ರದ ಸಚಿವ, ಎನ್‌ಸಿಪಿ ಮುಖ್ಯವಕ್ತಾರ ನವಾಬ್‌ ಮಲಿಕ್‌ ಹೇಳಿದರು.

‘ಜ.20ರಿಂದ ಭದ್ರತಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿಲ್ಲ. ಈ ಕುರಿತು ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT