<p><strong>ನವದೆಹಲಿ: </strong>ಪೂರ್ವ ದೆಹಲಿಯ ಅಶೋಕ ನಗರದಲ್ಲಿ ಶನಿವಾರ ತಡರಾತ್ರಿ ಪತ್ರಕರ್ತೆಮಿತಾಲಿ ಚಂದೋಲಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಕೌಟುಂಬಿಕ ಕಲಹ ಈ ದಾಳಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಮಿತಾಲಿ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ.ಅವರ ಕೈಗೆ ಗುಂಡು ತಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ.</p>.<p>‘ಕಾರಿನಲ್ಲಿ ತೆರಳುತ್ತಿದ್ದ ವೇಳೆ ಇಬ್ಬರು ಮುಸುಕುಧಾರಿಗಳು ಮತ್ತೊಂದು ಕಾರಿನಲ್ಲಿ ಬಂದು ಅಡ್ಡಗಟ್ಟಲು ಯತ್ನಿಸಿದರು. ಮುಂಭಾಗದ ಗಾಜಿನ ಮೇಲೆ ಮೊಟ್ಟೆ ಎಸೆದರು. ಆಗಲೂ ಕಾರು ನಿಲ್ಲಿಸದೆ ಇದ್ದಾಗ ನನ್ನ ಮೇಲೆ ಎರಡು ಸುತ್ತು ಗುಂಡು ಹಾರಿಸಿದರು’ ಎಂದು ಮಿತಾಲಿಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.</p>.<p>‘ನೋಯ್ಡಾದಲ್ಲಿ ಸುದ್ದಿವಾಹಿನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಮಿತಾಲಿ, ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ವೈಯಕ್ತಿಕ ದ್ವೇಷ ಸೇರಿದಂತೆ ಎಲ್ಲಾ ಆಯಾಮಗಳಿಂದಲೂ ಪ್ರಕರಣದ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ದಾಳಿ ನಡೆದ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳಿದ್ದವೇ ಎಂದು ಪರಿಶೀಲಿಸಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳಿದ್ದರೆ ದಾಳಿ ನಡೆಸಿದವರ ಚಹರೆ ಪತ್ತೆ ಸಾಧ್ಯವಾಗಬಹುದು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪೂರ್ವ ದೆಹಲಿಯ ಅಶೋಕ ನಗರದಲ್ಲಿ ಶನಿವಾರ ತಡರಾತ್ರಿ ಪತ್ರಕರ್ತೆಮಿತಾಲಿ ಚಂದೋಲಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಕೌಟುಂಬಿಕ ಕಲಹ ಈ ದಾಳಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಮಿತಾಲಿ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ.ಅವರ ಕೈಗೆ ಗುಂಡು ತಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ.</p>.<p>‘ಕಾರಿನಲ್ಲಿ ತೆರಳುತ್ತಿದ್ದ ವೇಳೆ ಇಬ್ಬರು ಮುಸುಕುಧಾರಿಗಳು ಮತ್ತೊಂದು ಕಾರಿನಲ್ಲಿ ಬಂದು ಅಡ್ಡಗಟ್ಟಲು ಯತ್ನಿಸಿದರು. ಮುಂಭಾಗದ ಗಾಜಿನ ಮೇಲೆ ಮೊಟ್ಟೆ ಎಸೆದರು. ಆಗಲೂ ಕಾರು ನಿಲ್ಲಿಸದೆ ಇದ್ದಾಗ ನನ್ನ ಮೇಲೆ ಎರಡು ಸುತ್ತು ಗುಂಡು ಹಾರಿಸಿದರು’ ಎಂದು ಮಿತಾಲಿಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.</p>.<p>‘ನೋಯ್ಡಾದಲ್ಲಿ ಸುದ್ದಿವಾಹಿನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಮಿತಾಲಿ, ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ವೈಯಕ್ತಿಕ ದ್ವೇಷ ಸೇರಿದಂತೆ ಎಲ್ಲಾ ಆಯಾಮಗಳಿಂದಲೂ ಪ್ರಕರಣದ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ದಾಳಿ ನಡೆದ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳಿದ್ದವೇ ಎಂದು ಪರಿಶೀಲಿಸಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳಿದ್ದರೆ ದಾಳಿ ನಡೆಸಿದವರ ಚಹರೆ ಪತ್ತೆ ಸಾಧ್ಯವಾಗಬಹುದು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>