ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯ್ಯಪ್ಪನನ್ನು ನೋಡಿ ಬಂದ ಕನಕದುರ್ಗ ಮೇಲೆ ಸಂಬಂಧಿಕರಿಂದ ಹಲ್ಲೆ:ಆಸ್ಪತ್ರೆಗೆ ದಾಖಲು

Last Updated 15 ಜನವರಿ 2019, 5:23 IST
ಅಕ್ಷರ ಗಾತ್ರ

ತಿರುವನಂತಪುರ: ಶಬರಿಮಲೆ ಅಯ್ಯಪ್ಪನನ್ನು ದರ್ಶನ ಮಾಡಿದ್ದ ಕನಕದುರ್ಗ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಭದ್ರತೆಯ ಕಾರಣಕ್ಕೆ ಕೆಲ ಕಾಲ ಅಜ್ಞಾತ ಸ್ಥಳದಲ್ಲಿದ್ದ ಅವರು ಸೋಮವಾರವಷ್ಟೇ ಮನೆಗೆ ಹಿಂದಿರುಗಿದ್ದರು. ಈ ವೇಳೆ ಸಂಬಂಧಿಕರು ಅವರನ್ನು ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಅಸ್ವಸ್ಥರಾದರು.

ಮಲಪುರಂ ಜಲ್ಲೆಯ ಪೆರಿಂಥಲಮನ್ನಾ ಪಟ್ಟಣದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ವರದಿ ಮಾಡಿದೆ. ‘ಕನಕದುರ್ಗ ಮೇಲೆ ಆಕೆಯ ಅತ್ತೆ ಹಲ್ಲೆ ಮಾಡಿದ್ದಾರೆ’ ಎಂದು ‘ಎನ್‌ಡಿಟಿವಿ’ ವರದಿ ತಿಳಿಸಿದೆ.

ಜ.2ರಂದು ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ ಮಾಡಿದ ಕನಕದುರ್ಗ ದೇಶವ್ಯಾಪಿ ಸುದ್ದಿಯಾಗಿದ್ದರು. ಆದರೆ ಅವರ ಪತಿ ‘ನನ್ನ ಹೆಂಡತಿ ನಾಪತ್ತೆಯಾಗಿದ್ದಾಳೆ’ ಎಂದು ಪೊಲೀಸರಿಗೆ ದೂರು ನೀಡಿದ್ದರು. ಅವರ ಕುಟುಂಬ ‘ನಿನಗೂ ನಮಗೂ ಸಂಬಂಧವಿಲ್ಲ’ ಎಂದು ಆಕೆಯೊಂದಿಗಿನ ಸಂಬಂಧವನ್ನೇನಿರಾಕರಿಸಿತ್ತು.

ಶಬರಿಮಲೆ ಏರಿದ್ದ ಬಿಂದು ಅಮ್ಮಿನಿ ಮತ್ತು ಕನಕದುರ್ಗ ಅವರಿಗೆಕಟ್ಟರ್ ವಾದಿಗಳಿಂದ ಜೀವಬೆದರಿಕೆ ಇದ್ದ ಹಿನ್ನೆಲೆಯಲ್ಲಿ ಅಜ್ಞಾತಸ್ಥಳದಲ್ಲಿ ಪೊಲೀಸರು ನೆಲೆ ಕಲ್ಪಿಸಿದ್ದರು. ಇವರಿಬ್ಬರೂ ಅಯ್ಯಪ್ಪನ ದರ್ಶನ ಪಡೆದ ನಂತರ ಕೇರಳದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

ಮತ್ತಷ್ಟು ಓದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT