ತಿರುವನಂತಪುರ: ಶಬರಿಮಲೆ ಅಯ್ಯಪ್ಪನನ್ನು ದರ್ಶನ ಮಾಡಿದ್ದ ಕನಕದುರ್ಗ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಭದ್ರತೆಯ ಕಾರಣಕ್ಕೆ ಕೆಲ ಕಾಲ ಅಜ್ಞಾತ ಸ್ಥಳದಲ್ಲಿದ್ದ ಅವರು ಸೋಮವಾರವಷ್ಟೇ ಮನೆಗೆ ಹಿಂದಿರುಗಿದ್ದರು. ಈ ವೇಳೆ ಸಂಬಂಧಿಕರು ಅವರನ್ನು ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಅಸ್ವಸ್ಥರಾದರು.