2008ರ ಮುಂಬೈ ದಾಳಿಯೂ ’ಭಯೋತ್ಪಾದಕ ಕೃತ್ಯ‘ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಇತ್ತೀಚಿಗೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾವತ್, ’ಈ ದಾಳಿಯ ಹಿಂದೆ ಯಾರ ಕೈವಾಡವಿತ್ತು ಎಂಬುದುಅಂತರರಾಷ್ಟ್ರೀಯ ಸಮುದಾಯಕ್ಕೆ ಗೊತ್ತಿದೆ. ಯಾರು ದಾಳಿ ನಡೆಸಿದ್ದಾರೆನಮಗೂ ಗೊತ್ತಿದೆ, ಈ ಬಗ್ಗೆ ಹೆಚ್ಚಿನ ಹೇಳಿಕೆ ನೀಡಬೇಕಾದ ಅಗತ್ಯವಿಲ್ಲ‘ ಎಂದರು.