ಕೋವಿಡ್–19 ಹಿನ್ನೆಲೆಯಲ್ಲಿಎನ್ಪಿಆರ್ಪರಿಷ್ಕರಣೆಯನ್ನು ಮಾರ್ಚ್ 25ರಂದೇ ಕೇಂದ್ರ ಸರ್ಕಾರ ಮುಂದೂಡಿತ್ತು.2021ರ ಮೊದಲ ಹಂತದ ಜನಗಣತಿ ಮತ್ತು ಎನ್ಪಿಆರ್ ಅನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿತ್ತು.ಕೊವಿಡ್–19 ಸೋಂಕು ಭೀತಿ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಎನ್ಪಿಆರ್ನಂತಹ ಯೋಜನೆಗಳನ್ನು ಸರ್ಕಾರ ಮುಂದೂಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಿದ್ದವು.