ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಪ್ಪು ತೀರ್ಪು ನೀಡದವರೇ ಇಲ್ಲ’

Last Updated 3 ಅಕ್ಟೋಬರ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ‘ತಪ್ಪು ತೀರ್ಪು ನೀಡಿಲ್ಲ’ ಎಂದು ಯಾವುದೇ ನ್ಯಾಯಮೂರ್ತಿ ಹೇಳಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ತಪ್ಪು ತೀರ್ಪು ನೀಡಿದ್ದಾರೆ ಎಂಬ ಕಾರಣಕ್ಕೆ ನ್ಯಾಯಮೂರ್ತಿಗಳು ಅಥವಾ ನ್ಯಾಯಾಧೀಶರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗದು. ಆದರೆ ಬಾಹ್ಯ ಒತ್ತಡಕ್ಕೆ ಒಳಗಾಗಿ ಅಂತಹ ತೀರ್ಪು ನೀಡಿದ್ದಾರೆ ಎಂಬ ಸಾಕ್ಷ್ಯ ಇದ್ದರೆ ಮಾತ್ರ ಶಿಸ್ತು ಕ್ರಮ ಸಾಧ್ಯ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

‘ತಪ್ಪು ಮಾಡುವುದು ಮಾನವಸಹಜ. ತಪ್ಪು ಆದೇಶವನ್ನು ನೀಡಿಯೇ ಇಲ್ಲ ಎಂದು ನಮ್ಮನ್ನೂ ಸೇರಿಸಿ ಯಾರೂ ಹೇಳಿಕೊಳ್ಳಲಾಗದು’ ಎಂದು ನ್ಯಾಯಮೂರ್ತಿಗಳಾದ ದೀಡಪಕ್‌ ಗುಪ್ತಾ ಮತ್ತು ಅನಿರುದ್ಧ ಅವರ ಪೀಠವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT