ನವದೆಹಲಿ: ಭಾನುವಾರ ಬೆಳ್ಳಂಬೆಳಗ್ಗೆ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಾಜ್ಮಂಡಿಪ್ರದೇಶದ ಮೂರು ಮಹಡಿ ಕಟ್ಟಡದ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 43ಮಂದಿ ಮೃತಪಟ್ಟಿದ್ದಾರೆ.
ನಸುಕಿನ 5 ಗಂಟೆ ಸುಮಾರಿಗೆಅವಘಡ ಸಂಭವಿಸಿದೆ.ಕಟ್ಟಡದೊಳಗೆ ಇನ್ನು ಹಲವು ಮಂದಿ ಸಿಲುಕಿದ್ದು, ಇದುವರೆಗೆ 50ಕ್ಕೂ ಹೆಚ್ಚು ಮಂದಿಯನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಹಾಗೂ ಕಾರ್ಯಾಚರಣೆ ಮುಂದುವರಿಸಿದ್ದಾರೆ.