ಭಾನುವಾರ ಮಹಾರಾಷ್ಟ್ರದ ಲಾಥೂರ್ ಜಿಲ್ಲೆಯಲ್ಲಿವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ರಾಹುಲ್, ದೇಶದ ಆರ್ಥಿಕತೆ ಮುಂದಿನ ಆರೇಳು ತಿಂಗಳಲ್ಲಿ ಮತ್ತಷ್ಟು ಕೆಟ್ಟ ಸ್ಥಿತಿಗೆ ತಲುಪಲಿದೆ. ದೇಶದಲ್ಲಿನ ನಿಜವಾದ ಸಮಸ್ಯೆ ಬಗ್ಗೆ ಮಾತನಾಡುವುದರ ಬದಲು ಮೋದಿ ಮತ್ತು ಅವರ ಪಕ್ಷ ಸಂವಿಧಾನದ 370ನೇ ವಿಧಿ ಮತ್ತು ಚಂದ್ರಯಾನದ ಬಗ್ಗೆ ಮಾತನಾಡಿ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ.