ಲಖನೌ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸಂಪುಟದಲ್ಲಿ ಸಚಿವರಾಗಿರುವ ಮೂವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಹಾಗಾಗಿ, ಸಂಪುಟದಲ್ಲಿ ಮೂರು ಸ್ಥಾನಗಳು ಖಾಲಿಯಾಗಲಿವೆ. ಬಿಜೆಪಿಯ ಮೇಲೆ ಅತೃಪ್ತಿಗೊಂಡು ಎನ್ಡಿಎ ಮೈತ್ರಿ ಕಡಿದುಕೊಂಡಿದ್ದ ಎಸ್ಬಿಎಸ್ಪಿ ನಾಯಕ ಒ.ಪಿ. ರಾಜ್ಭರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ. ಹೀಗಾಗಿ ಮತ್ತೊಂದು ಸ್ಥಾನವೂ ಖಾಲಿಯಾಗಿದೆ.