ಆಡಳಿತ ಮತ್ತು ಬಿಜೆಪಿ ಸದಸ್ಯರು ಪದೇ ಪದೆ ತಮ್ಮ ಹೆಸರು ಪ್ರಸ್ತಾಪ ಮಾಡುತ್ತಿರುವುದನ್ನು ನೋಡಿ ಸಭಾಧ್ಯಕ್ಷರು ಈ ರೀತಿ ಹೇಳಿದ್ದಾರೆ. ‘ರೇಪ್ ಒಂದೇ ಸಲ ಆಗಿ ಹೋಗಿರುತ್ತದೆ. ಆದರೆ ವಿಚಾರಣೆ ವೇಳೆ ಯಾರು ಮಾಡಿದರು, ಎಲ್ಲಿ ಮಾಡಿದರು, ಹೇಗೆ ಮಾಡಿದರು, ಎಷ್ಟೊತ್ತು ಮಾಡಿದರು? ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಪದೇ ಪದೇ ಕೇಳಿ ಕಿರಿಕಿರಿ ಉಂಟು ಮಾಡಲಾಗುತ್ತದೆ. ಈ ಪ್ರಕರಣದಲ್ಲಿ ನನ್ನ ಸ್ಥಿತಿಯೂ ಹಾಗೆಯೇ ಆಗಿದೆ’ ಎಂದು ರಮೇಶ್ ಕುಮಾರ್ ಹೇಳಿದಾಗ ಸದನದಲ್ಲಿ ಎಲ್ಲರೂ ನಕ್ಕಿದ್ದರು.