<p><strong>ಅಮರಾವತಿ:</strong> ಲೋಕಸಭಾ ಚುನಾವಣೆಯ ಮತ ಎಣಿಕೆಯ ದಿನ ತೆಲುಗು ದೇಶಂ ಪಕ್ಷದವರು (ಟಿಡಿಪಿ) ಗಲಭೆ ಸೃಷ್ಟಿಸುವ ಸಾಧ್ಯತೆ ಇರುವುದರಿಂದ ಮತ ಎಣಿಕೆ ಕೇಂದ್ರಗಳಿಗೆ ಕೇಂದ್ರ ಮೀಸಲುಪಡೆಯ ರಕ್ಷಣೆ ಒದಗಿಸಬೇಕು ಎಂದು ವೈಎಸ್ಆರ್ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.</p>.<p>ಈ ಬಗ್ಗೆ ಆಯೋಗಕ್ಕೆ ಪತ್ರ ಬರೆದಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ವಿ. ವಿಜಯಸಾಯಿ ರೆಡ್ಡಿ ಅವರು, ‘ಆಂಧ್ರದಲ್ಲಿ ಆಡಳಿತ ನಡೆಸುತ್ತಿರುವ ಟಿಡಿಪಿ, ಮತ ಎಣಿಕೆಯ ಸಂದರ್ಭದಲ್ಲಿ ಗಲಭೆ ಸೃಷ್ಟಿಸಲು ಯೋಜನೆ ರೂಪಿಸುತ್ತಿದೆ ಎಂಬ ಮಾಹಿತಿ ಲಭಿಸಿದೆ ಎಂದಿದ್ದಾರೆ.</p>.<p>ಮತ ಎಣಿಕೆಯ ಸಂದರ್ಭದಲ್ಲಿಅಧಿಕಾರಿಗಳ ಮೇಲೆ ಆ ಪಕ್ಷದ ನಾಯಕರು ಒತ್ತಡ ಹೇರುವ ಸಾಧ್ಯತೆ ಇರುವುದರಿಂದ ಚುನಾವಣಾ ಆಯೋಗ ಎಣಿಕಾ ಕಾರ್ಯದ ಮೇಲೆ ಸತತವಾಗಿ ನಿಗಾ ಇಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ಲೋಕಸಭಾ ಚುನಾವಣೆಯ ಮತ ಎಣಿಕೆಯ ದಿನ ತೆಲುಗು ದೇಶಂ ಪಕ್ಷದವರು (ಟಿಡಿಪಿ) ಗಲಭೆ ಸೃಷ್ಟಿಸುವ ಸಾಧ್ಯತೆ ಇರುವುದರಿಂದ ಮತ ಎಣಿಕೆ ಕೇಂದ್ರಗಳಿಗೆ ಕೇಂದ್ರ ಮೀಸಲುಪಡೆಯ ರಕ್ಷಣೆ ಒದಗಿಸಬೇಕು ಎಂದು ವೈಎಸ್ಆರ್ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.</p>.<p>ಈ ಬಗ್ಗೆ ಆಯೋಗಕ್ಕೆ ಪತ್ರ ಬರೆದಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ವಿ. ವಿಜಯಸಾಯಿ ರೆಡ್ಡಿ ಅವರು, ‘ಆಂಧ್ರದಲ್ಲಿ ಆಡಳಿತ ನಡೆಸುತ್ತಿರುವ ಟಿಡಿಪಿ, ಮತ ಎಣಿಕೆಯ ಸಂದರ್ಭದಲ್ಲಿ ಗಲಭೆ ಸೃಷ್ಟಿಸಲು ಯೋಜನೆ ರೂಪಿಸುತ್ತಿದೆ ಎಂಬ ಮಾಹಿತಿ ಲಭಿಸಿದೆ ಎಂದಿದ್ದಾರೆ.</p>.<p>ಮತ ಎಣಿಕೆಯ ಸಂದರ್ಭದಲ್ಲಿಅಧಿಕಾರಿಗಳ ಮೇಲೆ ಆ ಪಕ್ಷದ ನಾಯಕರು ಒತ್ತಡ ಹೇರುವ ಸಾಧ್ಯತೆ ಇರುವುದರಿಂದ ಚುನಾವಣಾ ಆಯೋಗ ಎಣಿಕಾ ಕಾರ್ಯದ ಮೇಲೆ ಸತತವಾಗಿ ನಿಗಾ ಇಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>