ಅಮರಾವತಿ: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಸ್ಪರ್ಧಿಸುವುದಿಲ್ಲ. 2019ರಲ್ಲಿ ಆಂಧ್ರದಲ್ಲಿ ನಡೆಯುವ ಚುನಾವಣೆಯತ್ತ ಸಂಪೂರ್ಣ ಗಮನ ಕೇಂದ್ರೀಕರಿಸಿದ್ದೇವೆ.2024ರ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ತೆಲಂಗಾಣದಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಗಮನ ಕೊಡಲಾಗುವುದು ಎಂದು ಪಕ್ಷದ ನಾಯಕ ಜಗನ್ಮೋಹನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.