ಸಾರ್ವಜನಿಕ ಹಿತಾಸಕ್ತಿಯಿಂದ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಲು ಹಾಗೂ ಆಧಾರ್ ದುರ್ಬಳಕೆಯನ್ನು ತಡೆಯಲು ಯುಐಡಿಎಐಗೆ ಈ ಕಾಯ್ದೆ ಸಹಕಾರಿಯಾಗಲಿದೆ. ವ್ಯಕ್ತಿಯು ತನ್ನ ಗುರುತು ಸಾಬೀತುಪಡಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕಿಲ್ಲ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ. ಆದರೆ ಆಧಾರ್ ಬಳಕೆ ಮೇಲೆ ಇರುವ ನಿರ್ಬಂಧಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲು ಮಸೂದೆ ಅವಕಾಶ ನೀಡಿದೆ.