ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯ್ಯಪ್ಪಸ್ವಾಮಿ ದೇವಸ್ಥಾನದ ಗರುಡಗಂಭ ಪ್ರತಿಷ್ಠಾಪನೆ

Last Updated 10 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಹದೇವಪುರ ಕ್ಷೇತ್ರದ ವರ್ತೂರು ಗ್ರಾಮದಲ್ಲಿ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಗರುಡಗಂಭ ಹಾಗೂ ಬಲಿ ಪೀಠಗಳ ಪ್ರತಿಷ್ಠಾಪನಾ ಕಾರ್ಯಕ್ರಮ ಶನಿವಾರ ನಡೆಯಿತು.

ಬೆಳಿಗ್ಗೆ 6ಕ್ಕೆ ವಿಶೇಷ ಪೂಜೆಗಳು ನಡೆದವು. 8.40ಕ್ಕೆ ನಾಗದೇವತೆಗಳ ಪ್ರತಿಷ್ಠಾಪನೆ, ಬಲಿ ಪೀಠ, ಗರುಡಗಂಭ ಪ್ರತಿಷ್ಠಾಪನೆ ಮಾಡಲಾಯಿತು. ಬಳಿಕ ಕುಂಭಾಭಿಷೇಕ ನಡೆಯಿತು.

ವರ್ತೂರು, ಮಧುರಾನಗರ, ಸೊರಹುಣಸೆ, ಬೆಳ್ಳಿಕೆರೆ, ಮುತ್ಸಂದ್ರ, ರಾಮಗೊಂಡನಹಳ್ಳಿ, ಬಳಗೆರೆ, ಪಣತ್ತೂರು ಹಾಗೂ ಗುಂಜೂರು ಗ್ರಾಮದ ನೂರಾರು ಭಕ್ತರು ಪಾಲ್ಗೊಂಡಿದ್ದರು. ಎಲ್ಲರಿಗೂ ಅನ್ನಸಂತರ್ಪಣೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT