ಗಡಿ ನಿಯಂತ್ರಣ ರೇಖೆ ಬಳಿಯ ಭಾರತೀಯ ವಾಯುಪಡೆ ನಡೆಸಿದ ದಾಳಿಯನ್ನು ಪಾಕಿಸ್ತಾನ ರಕ್ಷಣಾ ಇಲಾಖೆ ಖಂಡಿಸಿದೆ. ಈ ವೇಳೆ ಪ್ರತಿಕ್ರಿಯಿಸಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್, ‘ಸಮಯ ಮತ್ತು ಸ್ಥಳವನ್ನು ಆಯ್ಕೆ ಮಾಡಿ ಪಾಕಿಸ್ತಾನ ಪ್ರತಿಕ್ರಿಯೆ ನೀಡಲಿದೆ’ ಎಂದರು.‘ಎಲ್ಲದಕ್ಕೂ ಸಿದ್ಧರಾಗಿರಿ’ ಎಂದು ಪಾಕ್ ಸೇನೆಗೆ ನಿರ್ದೇಶನವನ್ನೂ ನೀಡಿದ್ದಾರೆ.