ಈ ಕುರಿತು ಸರಣಿ ಟ್ವೀಟ್ಗಳನ್ನು ಮಾಡಿರುವ ಮಾಯಾವತಿ, ‘ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇಬ್ಬರೂ ಪ್ರತಿನಿಧಿಸುವ ಪುರ್ವಾಂಚಲ ಪ್ರದೇಶದಲ್ಲಿ ಅಭಿವೃದ್ಧಿ ಮರೆಯಾಗಿದೆ.ನೀಡಿದ್ದ ಭರವಸೆಗಳು ಹುಸಿಯಾಗಿವೆ. ಗೋರ್ಖ್ಪುರದಲ್ಲಿ ಯೋಗಿ ಅವರನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ವಾರಾಣಸಿಯಲ್ಲಿ ಮೋದಿ ಅವರ ಸೋಲು ಅವರ ಗೆಲುವಿಗಿಂತಲೂ ಐತಿಹಾಸಿಕವಾಗಿರುತ್ತದೆ. 1977ರಲ್ಲಿ ರಾಯ್ಬರೇಲಿಯಲ್ಲಿ ನಿರ್ಮಾಣವಾದ ಸ್ಥಿತಿಯೇ ಇಲ್ಲಿ ಮರುಕಳಿಸಬಹುದು’ ಎಂದು ಬರೆದುಕೊಂಡಿದ್ದಾರೆ.