ಕಳೆದ ವರ್ಷ ಅಕ್ಟೋಬರ್ನಲ್ಲಿ ಪಟೇಲ್ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ್ದ ಮೋದಿ, ಪಟೇಲ್ ಅವರು ದೇಶದ ಮೊದಲ ಪ್ರಧಾನಿ ಆಗದೇ ಇದ್ದುದರ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಮರುಗುವಂತಾಗಿದೆ. ಪಟೇಲ್ ಅವರು ದೇಶದ ಮೊದಲ ಪ್ರಧಾನಿಯಾಗಬೇಕಿತ್ತು. ಅವರು ಪ್ರಧಾನಿಯಾಗಿರುತ್ತಿದ್ದರೆ ದೇಶದ ಸ್ಥಿತಿಯೇ ಬದಲಾಗುತ್ತಿತ್ತು ಎಂದಿದ್ದರು.