ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಎಲ್ಲಾ ಕುಟುಂಬಗಳ ಸಾರ್ವತ್ರಿಕ ಆರೋಗ್ಯ ಸಮೀಕ್ಷೆಗೆ ಆದೇಶ

Last Updated 28 ಏಪ್ರಿಲ್ 2020, 17:36 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಉಸಿರಾಟದ ಸಮಸ್ಯೆ (ಎಸ್ ಎ ಆರ್ ಐ), ಐಎಲ್ಐ ಮೊದಲಾದ ಕಾಯಿಲೆಗಳ ಬಗ್ಗೆ ನಿಗಾ ವಹಿಸಿ ಮಾಹಿತಿ ಸಂಗ್ರಹಿಸುವುದಕ್ಕಾಗಿ ಸಾರ್ವತ್ರಿಕ ಆರೋಗ್ಯ ಸಮೀಕ್ಷೆಗೆ ಆದೇಶ ನೀಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಂಗಳವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಇದಕ್ಕಾಗಿಯೇ ಅಭಿವೃದ್ಧಿ ಪಡಿಸಲಾದ "ಹೆಲ್ತ್ ವಾಚ್ ಮೊಬೈಲ್ ಆ್ಯಪ್" ನಲ್ಲಿ ಅಥವಾ ಶಿಕ್ಷಣಾಧಿಕಾರಿ ಕಚೇರಿಯಲ್ಲಿನ ಕಂಪ್ಯೂಟರ್ ಮೂಲಕ ಆನ್ ಲೈನ್ ನಲ್ಲಿ ಶೀಘ್ರ ಮಾಹಿತಿ ಅಪ್ ಲೋಡ್ ಮಾಡಬೇಕು ಎಂದು ಸೂಚಿಸಿದ್ದಾರೆ.

ಒಂದೊಂದು ಮತಗಟ್ಟೆಯನ್ನು ಘಟಕವನ್ನಾಗಿ ಮಾಡಲಾಗಿದ್ದು, ಈ ಹಿಂದೆ ಮತಗಟ್ಟೆ ಅಧಿಕಾರಿಗಳಾಗಿದ್ದವರು ಇನ್ನೊಬ್ಬರು ಶಿಕ್ಷಕರ ನೆರವು ಪಡೆದು ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT