ಠಾಣಾಧಿಕಾರಿ ರಾಕೇಶ್ ಕುಮಾರ್ ಸೇರಿದಂತೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 323 (ನೋವುಂಟು ಮಾಡುವುದು), 504 (ಉದ್ದೇಶಪೂರ್ವಕ ಅವಮಾನ), 506 (ಕ್ರಿಮಿನಲ್ ಬೆದರಿಕೆ), 364 (ಅಪಹರಣ), 392 (ಕಳ್ಳತನಕ್ಕಾಗಿ ಶಿಕ್ಷೆ) ಮತ್ತು 342 (ತಪ್ಪಾಗಿ ಬಂಧಿಸಿಟ್ಟಿರುವುದು) ಅಡಿಯಲ್ಲಿಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ ಕುಮಾರ್ ಮತ್ತು ಕಾನ್ಸ್ಟೆಬಲ್ ಸಂಜಯ್ ಪವಾರ್ ಅವರನ್ನು ಬುಧವಾರ ಅಮಾನತು ಮಾಡಲಾಗಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಸುಭಾಷ್ ಚಾಂದ್ ದುಬೆ ತಿಳಿಸಿದ್ದಾರೆ.