‘ಬಜೆಟ್ನಲ್ಲಿ ಘೋಷಿಸಿರುವ ಯೋಜನೆಗಳಿಗೆ ಟೆಂಡರ್ ಪ್ರಕ್ರಿಯೆ ಶುರುವಾಗಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಯಾಗಿಲ್ಲ. ನಗರಾಭಿವೃದ್ಧಿ ಇಲಾಖೆಯ ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ ಅನುದಾನ ಬಳಕೆಯಾಗಿಲ್ಲ. ಸ್ವಚ್ಛ ಭಾರತ್, ಕೌಶಲ ಅಭಿವೃದ್ಧಿ, ಸಮಾಜ ಕಲ್ಯಾಣ, ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿ ಶೇ 25ರಷ್ಟು ಮಾತ್ರ ಇದೆ. ಈ ಅಂಕಿ–ಅಂಶಗಳನ್ನು ಮರೆಮಾಚಿ ಕೇಂದ್ರ ಸರ್ಕಾರದ ಬಗ್ಗೆ ಟೀಕೆ ಮಾಡುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.