ವಿಧಾನ ಪರಿಷತ್ನಲ್ಲಿ ನಡೆದ ಸುದೀರ್ಘ ಚರ್ಚೆಯ ಕೊನೆಯಲ್ಲಿ ಶನಿವಾರ ಕಂದಾಯ ಸಚಿವ ಆರ್. ಅಶೋಕ ಸರ್ಕಾರದ ಪರವಾಗಿ ಉತ್ತರ ನೀಡಿದರು. ಆದರೆ ಕೈಮಗ್ಗ ಘಟಕ ನಾಶವಾದರೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಿರಲಿಲ್ಲ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ ಅವರು, ಸರ್ಕಾರ ತಕ್ಷಣ ತನ್ನ ನಿಲುವನ್ನು ತಿಳಿಸಬೇಕು ಎಂದರು.