ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮವಾಗಿ ಸಾಗಿಸುತ್ತಿದ್ದ ₹1.65 ಕೋಟಿ ನಗದು ವಶ; ಇಬ್ಬರ ಬಂಧನ

Last Updated 2 ನವೆಂಬರ್ 2018, 8:09 IST
ಅಕ್ಷರ ಗಾತ್ರ

ಉಡುಪಿ: ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಶುಕ್ರವಾರ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ₹1.65 ಕೋಟಿ ನಗದನ್ನು ರೈಲ್ವೆ ರಕ್ಷಣಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ರಾಜಸ್ತಾನದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌.

ಮುಂಬೈಯಿಂದ ಎರ್ನಾಕುಲಂ ಮಾರ್ಗದಲ್ಲಿ ಸಂಚರಿಸುವ ನೇತ್ರಾವತಿ ಏಕ್ಸ್‌ಪ್ರೆಸ್‌ ರೈಲಿನಲ್ಲಿಹಣ ಸಾಗಾಟ ಮಾಡಲಾಗುತ್ತಿತ್ತು. ಈ ಹಣವನ್ನು ಪಡೆಯಲು ಇಂದ್ರಾಳಿ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಕಾಯುತ್ತ ಕುಳಿತ್ತಿದ್ದ. ಈ ಬಗ್ಗೆ ಸಂಶಯಗೊಂಡ ರೈಲ್ವೆ ರಕ್ಷಣಾ ಸಿಬ್ಬಂದಿ ವಿಚಾರಣೆ ಮಾಡಿದಾಗ ಅಕ್ರಮ ಪತ್ತೆಯಾಗಿದೆ.

ಐಟಿ ಅಧಿಕಾರಿಗಳು, ಉಡುಪಿ ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿದ್ದಾರೆ. ರೈಲ್ವೆ ರಕ್ಷಾಣಾ ದಳ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT