‘ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ್ದ ಕುಲಕರ್ಣಿ ರಾಜಕೀಯ ಲಾಭಕ್ಕಾಗಿ ಇದೀಗ ಸಮಾಜದ ಹೆಸರಲ್ಲಿ ಮತಯಾಚಿಸುತ್ತಿರುವುದು ಖಂಡನೀಯ’ ಎಂದು ಬಿಜೆಪಿ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ಶಂಕರ ಪಾಟೀಲ ಮುನೇನಕೊಪ್ಪ, ಪ್ರದೀಪ ಶೆಟ್ಟರ್, ಮಾಜಿ ಶಾಸಕರಾದ ಎಸ್.ಐ.ಚಿಕ್ಕನಗೌಡ್ರ, ಮೋಹನ ಲಿಂಬಿಕಾಯಿ, ಮಾಜಿ ಸಂಸದ ಮಂಜುನಾಥ ಕನ್ನೂರ ಸೇರಿದಂತೆ ಪಕ್ಷದ ಪ್ರಮುಖರು ಶನಿವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.