<p><strong>ಬೆಂಗಳೂರು:</strong> ಆರ್ಥಿಕವಾಗಿ ಹಿಂದುಳಿದವರಿಗೆರಾಜ್ಯ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಪಡೆಯುವಾಗ ಶೇ 10ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಪರಿಶೀಲಿಸಲು ರಚಿಸಲಾಗಿರುವ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಗುರುವಾರ ಸಭೆ ನಡೆಸಲಿದೆ.</p>.<p>2019ರ ಸಂವಿಧಾನ (103ನೇ ತಿದ್ದುಪಡಿ) ಕಾಯ್ದೆಯಂತೆ ಮೇಲ್ವರ್ಗ ಜಾತಿಯಲ್ಲಿರುವಆರ್ಥಿಕವಾಗಿ ಹಿಂದುಳಿದವರು ಮೀಸಲಾತಿಗೆ ಅರ್ಹರಾಗಿರುತ್ತಾರೆ. ಇದುವರೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗದವರಿಗೆ ಮಾತ್ರ ಈ ಸೌಲಭ್ಯ ಇತ್ತು.</p>.<p>ಕೇಂದ್ರ ಸರ್ಕಾರ ಕಳೆದ ಜನವರಿಯಲ್ಲಿ ಅಧಿಸೂಚನೆ ಹೊರಡಿಸಿ, ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ಕಲ್ಪಿಸಿತ್ತು. ಆದರೆ ರಾಜ್ಯ ಸರ್ಕಾರ ಇನ್ನೂ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿಲ್ಲ. ಸದ್ಯ ಕೇಂದ್ರ ಸರ್ಕಾರಿ ಸೇವೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಗೆ ಅರ್ಹತೆ ಪಡೆಯುವ ಆರ್ಥಿಕವಾಗಿ ಹಿಂದುಳಿದವರಿಗೆ ಅಗತ್ಯದ ಆದಾಯ ಮತ್ತು ಇತರಪ್ರಮಾಣಪತ್ರ ಕೊಡುವುದಕ್ಕೆ ಮಾತ್ರ ಸಂಬಂಧಪಟ್ಟ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದಆನುಮತಿ ನೀಡಲಾಗಿದೆ.</p>.<p>ಸಂವಿಧಾನ ತಿದ್ದುಪಡಿ ಎಂದರೆ ಅದು ಜಾರಿಗೆ ತರಲೇಬೇಕಾದ ಆದೇಶ ಅಲ್ಲ,ರಾಜ್ಯ ಸರ್ಕಾರ ಇದನ್ನು ಜಾರಿಗೆ ತರಲೂಬಹುದು ಅಥವಾ ತರದೆಯೂ ಇರಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮಹಮ್ಮದ್ ಮೊಹ್ಸಿನ್ ಹೇಳಿದರು.</p>.<p>‘ಶೇ 10ರ ಮೀಸಲಾತಿಯನ್ನು ಜಾರಿಗೆ ತರುವುದಕ್ಕೆ ಬಹಳ ತಯಾರಿಯ ಅಗತ್ಯ ಇದೆ’ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆರ್ಥಿಕವಾಗಿ ಹಿಂದುಳಿದವರಿಗೆರಾಜ್ಯ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಪಡೆಯುವಾಗ ಶೇ 10ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಪರಿಶೀಲಿಸಲು ರಚಿಸಲಾಗಿರುವ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಗುರುವಾರ ಸಭೆ ನಡೆಸಲಿದೆ.</p>.<p>2019ರ ಸಂವಿಧಾನ (103ನೇ ತಿದ್ದುಪಡಿ) ಕಾಯ್ದೆಯಂತೆ ಮೇಲ್ವರ್ಗ ಜಾತಿಯಲ್ಲಿರುವಆರ್ಥಿಕವಾಗಿ ಹಿಂದುಳಿದವರು ಮೀಸಲಾತಿಗೆ ಅರ್ಹರಾಗಿರುತ್ತಾರೆ. ಇದುವರೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗದವರಿಗೆ ಮಾತ್ರ ಈ ಸೌಲಭ್ಯ ಇತ್ತು.</p>.<p>ಕೇಂದ್ರ ಸರ್ಕಾರ ಕಳೆದ ಜನವರಿಯಲ್ಲಿ ಅಧಿಸೂಚನೆ ಹೊರಡಿಸಿ, ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ಕಲ್ಪಿಸಿತ್ತು. ಆದರೆ ರಾಜ್ಯ ಸರ್ಕಾರ ಇನ್ನೂ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿಲ್ಲ. ಸದ್ಯ ಕೇಂದ್ರ ಸರ್ಕಾರಿ ಸೇವೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಗೆ ಅರ್ಹತೆ ಪಡೆಯುವ ಆರ್ಥಿಕವಾಗಿ ಹಿಂದುಳಿದವರಿಗೆ ಅಗತ್ಯದ ಆದಾಯ ಮತ್ತು ಇತರಪ್ರಮಾಣಪತ್ರ ಕೊಡುವುದಕ್ಕೆ ಮಾತ್ರ ಸಂಬಂಧಪಟ್ಟ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದಆನುಮತಿ ನೀಡಲಾಗಿದೆ.</p>.<p>ಸಂವಿಧಾನ ತಿದ್ದುಪಡಿ ಎಂದರೆ ಅದು ಜಾರಿಗೆ ತರಲೇಬೇಕಾದ ಆದೇಶ ಅಲ್ಲ,ರಾಜ್ಯ ಸರ್ಕಾರ ಇದನ್ನು ಜಾರಿಗೆ ತರಲೂಬಹುದು ಅಥವಾ ತರದೆಯೂ ಇರಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮಹಮ್ಮದ್ ಮೊಹ್ಸಿನ್ ಹೇಳಿದರು.</p>.<p>‘ಶೇ 10ರ ಮೀಸಲಾತಿಯನ್ನು ಜಾರಿಗೆ ತರುವುದಕ್ಕೆ ಬಹಳ ತಯಾರಿಯ ಅಗತ್ಯ ಇದೆ’ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>