ಇಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಯೋಗಿ ವೇಮನ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ‘12 ವರ್ಷದ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಇದೇ ಜನಾರ್ದನರೆಡ್ಡಿ ಹಾಗೂ ರೆಡ್ಡಿ ಸಮಾಜ ಬಾಂಧವರು ಕಾರಣ ಎಂಬುದು ಎಲ್ಲರಿಗೂ ತಿಳಿದಿದೆ. ಇನ್ನು ಮುಂದೆಯೂ ಇತಿಹಾಸ ಸೃಷ್ಟಿಯಾಗಲಿದೆ. ಬಸವಾದಿ ಶರಣರ ನಾಡು ಬಸವಕಲ್ಯಾಣದಿಂದಲೇ ಶೀಘ್ರದಲ್ಲಿ ಮಹತ್ವದ ಕೆಲಸ ಆರಂಭಿಸುವೆ’ ಎಂದು ಹೇಳಿದರು.