ಮುಂಗಾರು ಅವಧಿ ಆರಂಭವಾದಾಗಿನಿಂದ ಉತ್ತಮ ಮಳೆಯಾಗುತ್ತಿದೆ. ಇದರಿಂದ ರೈತರು ಖುಷಿಯಾಗಿದ್ದು, ಹೊಲಗಳ ಉಳುಮೆ ಮಾಡಿ ನಾಟಿ ಕಾರ್ಯ ಆರಂಭಿಸಿದ್ದಾರೆ. ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಮತ್ತು ಕಾರವಾರ ತಾಲ್ಲೂಕುಗಳ ವಿವಿಧೆಡೆ, ಮಲೆನಾಡು ಪ್ರದೇಶದ ಯಲ್ಲಾಪುರ, ಶಿರಸಿ, ಸಿದ್ದಾಪುರ, ಜೊಯಿಡಾ ಭಾಗದಲ್ಲಿ ರೈತರು ಬಿಡುವಿಲ್ಲದ ಕೆಲಸದಲ್ಲಿ ನಿರತರಾಗಿದ್ದಾರೆ. ಮುಂಡಗೋಡ, ಹಳಿಯಾಳ ತಾಲ್ಲೂಕುಗಳಲ್ಲಿ ಮೆಕ್ಕೆಜೋಳ ಬೆಳೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.