<p><strong>ಹಾವೇರಿ:</strong> ‘ಏಪ್ರಿಲ್ ತಿಂಗಳಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮವೆಸಗಿದ ವಿವಿಧ ಜಿಲ್ಲೆಗಳ 146 ನ್ಯಾಯಬೆಲೆ ಅಂಗಡಿಗಳನ್ನು ಅಮಾನತು ಮಾಡಿದ್ದು, ₹ 4 ಲಕ್ಷ ದಂಡ ವಿಧಿಸಲಾಗಿದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ತಿಳಿಸಿದರು.</p>.<p>ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದಅವರು, ಹಾವೇರಿ ಜಿಲ್ಲೆಯಲ್ಲೂ 9 ನ್ಯಾಯಬೆಲೆ ಅಂಗಡಿಗಳಿಗೆ ನೋಟಿಸ್ ನೀಡಿದ್ದು, ಹಾನಗಲ್ ತಾಲ್ಲೂಕಿನ ಒಂದು ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಲಾಗಿದೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p><strong>ಇದನ್ನೂ ಓದಿ:</strong><a href="http://https://www.prajavani.net/district/kolar/k-gopalaiah-visited-to-malur-718282.html" target="_blank">ಬಡವರ ಅನ್ನಕ್ಕೆ ಅಡ್ಡಿ ಬಂದವರ ಮೇಲೆ ಕ್ರಮ</a></p>.<p>ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ದರ ಪಟ್ಟಿ ಪ್ರಕಟಿಸಬೇಕು. ತೂಕ ಮತ್ತು ಅಳತೆಯಲ್ಲಿ ವ್ಯತ್ಯಾಸವಾಗಬಾರದು ಮತ್ತು ಗ್ರಾಹಕರಿಂದ ಸೇವಾ ತೆರಿಗೆ ತೆಗೆದುಕೊಳ್ಳುವಂತಿಲ್ಲ. ಈ ಬಗ್ಗೆ ದೂರುಗಳು ಬಂದರೆ ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ತಂಡ ರಚನೆ ಮಾಡಿಕೊಂಡು ಪ್ರತಿ ನ್ಯಾಯಬೆಲೆ ಅಂಗಡಿಗೂ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.</p>.<p><strong>ಆಹಾರ ಕೊರತೆಯಿಲ್ಲ:</strong>ಕೇಂದ್ರ ಸರ್ಕಾರದ ಬಳಿ ವರ್ಷಕ್ಕೆ ಆಗುವಷ್ಟು ಆಹಾರ ದಾಸ್ತಾನು ಇದೆ. ಅದೇ ರೀತಿ ರಾಜ್ಯದಲ್ಲೂ ಕೊರತೆ ಇಲ್ಲ. 8 ಲಕ್ಷ ಪಡಿತರ ಚೀಟಿದಾರರಿಗೆ ಸಂಬಂಧಪಟ್ಟ ಒಟ್ಟು 27 ಲಕ್ಷ ಮಂದಿಗೆ ಪಡಿತರ ನೀಡುತ್ತಿದ್ದೇವೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ 31.5 ಲಕ್ಷ ಜನರಿಗೆ ಕೇಂದ್ರ ಸರ್ಕಾರ 3 ತಿಂಗಳು ಉಚಿತವಾಗಿ ಅಡುಗೆ ಅನಿಲ ವಿತರಿಸಲು ಕ್ರಮ ಕೈಗೊಂಡಿದೆ. ಈಗಾಗಲೇ ಏಪ್ರಿಲ್ ತಿಂಗಳ ಹಣ ಎಲ್ಲ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂದರು.</p>.<p><strong>1 ಲಕ್ಷ ಕುಟುಂಬಗಳಿಗೆ ಉಚಿತ ಅನಿಲ:</strong>ರಾಜ್ಯ ಸರ್ಕಾರ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ರಾಜ್ಯದ 1 ಲಕ್ಷ ಕುಟುಂಬಗಳಿಗೆ ₹ 27 ಕೋಟಿ ವೆಚ್ಚದಲ್ಲಿ 3 ತಿಂಗಳು ಉಚಿತವಾಗಿ ಅಡುಗೆ ಅನಿಲ ನೀಡಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರ ಭತ್ತ, ರಾಗಿ, ಜೋಳ ಖರೀದಿಸಲು ಅನುಮೋದನೆ ನೀಡಿದ್ದು, ಮಕ್ಕೆಜೋಳ ಖರೀದಿಸಲು ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಏಪ್ರಿಲ್ ತಿಂಗಳಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮವೆಸಗಿದ ವಿವಿಧ ಜಿಲ್ಲೆಗಳ 146 ನ್ಯಾಯಬೆಲೆ ಅಂಗಡಿಗಳನ್ನು ಅಮಾನತು ಮಾಡಿದ್ದು, ₹ 4 ಲಕ್ಷ ದಂಡ ವಿಧಿಸಲಾಗಿದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ತಿಳಿಸಿದರು.</p>.<p>ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದಅವರು, ಹಾವೇರಿ ಜಿಲ್ಲೆಯಲ್ಲೂ 9 ನ್ಯಾಯಬೆಲೆ ಅಂಗಡಿಗಳಿಗೆ ನೋಟಿಸ್ ನೀಡಿದ್ದು, ಹಾನಗಲ್ ತಾಲ್ಲೂಕಿನ ಒಂದು ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಲಾಗಿದೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p><strong>ಇದನ್ನೂ ಓದಿ:</strong><a href="http://https://www.prajavani.net/district/kolar/k-gopalaiah-visited-to-malur-718282.html" target="_blank">ಬಡವರ ಅನ್ನಕ್ಕೆ ಅಡ್ಡಿ ಬಂದವರ ಮೇಲೆ ಕ್ರಮ</a></p>.<p>ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ದರ ಪಟ್ಟಿ ಪ್ರಕಟಿಸಬೇಕು. ತೂಕ ಮತ್ತು ಅಳತೆಯಲ್ಲಿ ವ್ಯತ್ಯಾಸವಾಗಬಾರದು ಮತ್ತು ಗ್ರಾಹಕರಿಂದ ಸೇವಾ ತೆರಿಗೆ ತೆಗೆದುಕೊಳ್ಳುವಂತಿಲ್ಲ. ಈ ಬಗ್ಗೆ ದೂರುಗಳು ಬಂದರೆ ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ತಂಡ ರಚನೆ ಮಾಡಿಕೊಂಡು ಪ್ರತಿ ನ್ಯಾಯಬೆಲೆ ಅಂಗಡಿಗೂ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.</p>.<p><strong>ಆಹಾರ ಕೊರತೆಯಿಲ್ಲ:</strong>ಕೇಂದ್ರ ಸರ್ಕಾರದ ಬಳಿ ವರ್ಷಕ್ಕೆ ಆಗುವಷ್ಟು ಆಹಾರ ದಾಸ್ತಾನು ಇದೆ. ಅದೇ ರೀತಿ ರಾಜ್ಯದಲ್ಲೂ ಕೊರತೆ ಇಲ್ಲ. 8 ಲಕ್ಷ ಪಡಿತರ ಚೀಟಿದಾರರಿಗೆ ಸಂಬಂಧಪಟ್ಟ ಒಟ್ಟು 27 ಲಕ್ಷ ಮಂದಿಗೆ ಪಡಿತರ ನೀಡುತ್ತಿದ್ದೇವೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ 31.5 ಲಕ್ಷ ಜನರಿಗೆ ಕೇಂದ್ರ ಸರ್ಕಾರ 3 ತಿಂಗಳು ಉಚಿತವಾಗಿ ಅಡುಗೆ ಅನಿಲ ವಿತರಿಸಲು ಕ್ರಮ ಕೈಗೊಂಡಿದೆ. ಈಗಾಗಲೇ ಏಪ್ರಿಲ್ ತಿಂಗಳ ಹಣ ಎಲ್ಲ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂದರು.</p>.<p><strong>1 ಲಕ್ಷ ಕುಟುಂಬಗಳಿಗೆ ಉಚಿತ ಅನಿಲ:</strong>ರಾಜ್ಯ ಸರ್ಕಾರ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ರಾಜ್ಯದ 1 ಲಕ್ಷ ಕುಟುಂಬಗಳಿಗೆ ₹ 27 ಕೋಟಿ ವೆಚ್ಚದಲ್ಲಿ 3 ತಿಂಗಳು ಉಚಿತವಾಗಿ ಅಡುಗೆ ಅನಿಲ ನೀಡಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರ ಭತ್ತ, ರಾಗಿ, ಜೋಳ ಖರೀದಿಸಲು ಅನುಮೋದನೆ ನೀಡಿದ್ದು, ಮಕ್ಕೆಜೋಳ ಖರೀದಿಸಲು ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>