ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಜಾಮುದ್ದೀನ್ ಮಸೀದಿಗೆ ತೆರಳಿದ್ದ 19 ಜನ ಇಎಸ್‌ಐ ಆಸ್ಪತ್ರೆಗೆ ದಾಖಲು: ಕಾರಜೋಳ

Last Updated 1 ಏಪ್ರಿಲ್ 2020, 12:25 IST
ಅಕ್ಷರ ಗಾತ್ರ

ಕಲಬುರ್ಗಿ: ದೆಹಲಿಯ ನಿಜಾಮುದ್ದೀನ್ ದರ್ಗಾ ಬಳಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜಿಲ್ಲೆಯ 19 ಜನರನ್ನು ಜಿಲ್ಲಾಡಳಿತವು ಇಎಸ್‌ಐ ಆಸ್ಪತ್ರೆಯ ಕ್ವಾರಂಟೈನ್‌ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಿದೆ ಎಂದು ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ದೆಹಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಮುಕ್ತವಾಗಿ ವೈದ್ಯರ ಬಳಿ ಬರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ತಮ್ಮ ಕುಟುಂಬದ ಹಾಗೂ ಸಮಾಜದ ಆರೋಗ್ಯದ ಸಂರಕ್ಷಣೆಗಾಗಿ ಸ್ವಯಂ ಪ್ರೇರಿತವಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ವೈದ್ಯರ ಬಳಿ ಬಂದು ಆರೋಗ್ಯ ತಪಾಸಣೆಗೊಳಗಾಗಬೇಕು. ಕೊರೊನಾ ನಿಯಂತ್ರಣಕ್ಕಾಗಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ದಾಖಲಾಗಿರುವ 19 ಜನರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ. ಅದರ ಫಲಿತಾಂಶಕ್ಕಾಗಿ ಜಿಲ್ಲಾಡಳಿತ ಕಾಯುತ್ತಿದೆ.

ದೆಹಲಿಯಿಂದ ಬಂದವರು ಯಾರಾದರೂ ಇದ್ದರೆ ಸ್ವಯಂಪ್ರೇರಿತರಾಗಿ ಮಾಹಿತಿ ನೀಡಿ ತಪಾಸಣೆಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರೂ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT